ಬೇಲೂರು ಬಳಿ ಮರಕ್ಕೆ ಡಿಕ್ಕಿ ಹೊಡೆದ ಕಾರು:
ಬೆಳ್ತಂಗಡಿಯ ಪೆರಾಲ್ದರಕಟ್ಟೆಯ ವ್ಯಕ್ತಿ ಮೃತ್ಯು: ಮೂವರಿಗೆ ಗಂಭೀರ ಗಾಯ
ಬೆಳ್ತಂಗಡಿ: ಹಾಸನ ಜಿಲ್ಲೆಯ ಬೇಲೂರು ಬಳಿ ಕಳೆದ ರಾತ್ರಿ ಅಲ್ಟೊ ಕಾರು ಮರಕ್ಕೆ ಡಿಕ್ಕಿ ಹೊಡೆದು ನಡೆದ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಪೆರಾಲ್ದರಕಟ್ಟೆ ನಿವಾಸಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಅಪಘಾತದಲ್ಲಿ ಕಾರಿನಲ್ಲಿ ಸಹಪ್ರಯಾಣಿಕರಾಗಿದ್ದ ಇನ್ನೂ ಮೂವರಿಗೆ ಹೆಚ್ಚಿನ ಗಾಯಗಳಾಗಿವೆ ಎಂದೂ ತಿಳಿದುಬಂದಿದೆ.
ಅಪಘಾತದಲ್ಲಿ ಮೃತರಾದ ದುರ್ದೈವಿಯನ್ನು ಪೆರಾಲ್ದರಕಟ್ಟೆಯ ಶರೀಫ್ ಎಂಬವರೆಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಲಾಯಿಲ ಗ್ರಾಮದ ಕುಂಟಿನಿ ನಿವಾಸಿ ನೂರ್ ಮುಹಮ್ಮದ್, ಬಳಂಜದ ಅಝೀಝ್ ಹಾಗೂ ಕಕ್ಕಿಂಜೆಯ ಗಾಂಧಿ ನಗರ ನಿವಾಸಿ ಸಲೀಂ ಎಂಬವರಾಗಿದ್ದಾರೆ.
ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊರೆದೊಯ್ಯಲಾಗಿದೆ. ಇವರೆಲ್ಲರೂ ಸಂಬಂಧಿಗಳು ಹಾಗೂ ಸ್ನೇಹಿತರಾಗಿದ್ದು ಗಾರೆ ಕೆಲಸ, ಮೇಸ್ತ್ರಿ ಕೆಲಸ ಮಾಡಿಕೊಂಡವರಾಗಿದ್ದಾರೆ.
ಒಟ್ಟಿಗೆ ಜೊತೆಯಾಗಿ ಇವರು ಝಿಯಾರತ್ ಗಾಗಿ ಆ ಭಾಗಕ್ಕೆ ತೆರಳಿ ವಾಪಾಸಾಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಪ್ರಾಥಮಿಕ ಮಾಹಿತಿ ಲಭಿಸಿದೆ.
ಮೃತರಾದ ಶರೀಫ್ ಅವರ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಅವರ ಶರೀರವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತರಲಾಗಿದೆ.





