ಮೂತ್ರ ವಿಸರ್ಜನೆಗಾಗಿ ಕಾರಿನಿಂದ ಇಳಿದಿದ್ದ ವಿಧಾನ ಸಭೆಯ ಉಪಸಭಾಪತಿಗೆ ಬೈಕ್ ಢಿಕ್ಕಿ

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮೂತ್ರ ವಿಸರ್ಜನೆಗಾಗಿ ಕಾರಿನಿಂದ ಇಳಿದಿದ್ದ ವಿಧಾನ ಸಭೆಯ ಉಪಸಭಾಪತಿ ಹಾಗೂ ಹಾವೇರಿ ಕಾಂಗ್ರೆಸ್ ಶಾಸಕ ರುದ್ರಪ್ಪ ಲಮಾಣಿ ಅವರಿಗೆ ಶುಕ್ರವಾರ ಬೈಕ್ ಡಿಕ್ಕಿ ಹೊಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿ ಈ ಅಪಘಾತ ಸಂಭವಿಸಿದ್ದು, ರುದ್ರಪ್ಪ ಲಮಾಣಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರಿಂದ ಹಾವೇರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.