ತೋಟದಲ್ಲಿದ್ದಾಗ ಕಾಡಾನೆ ದಾಳಿ: ಮಹಿಳೆ ಬಲಿ

ಹಾಸನ: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ ನಡೆದಿದೆ. ಇದು ಕಳೆದ 2 ತಿಂಗಳಿನಲ್ಲಿ ನಡೆದ ನಾಲ್ಕನೇ ಸಾವಿನ ಪ್ರಕರಣವಾಗಿದೆ.
ಸುಶೀಲಮ್ಮ (63) ಕಾಡಾನೆ ದಾಳಿಗೆ ಮೃತಪಟ್ಟ ಮಹಿಳೆ. ಭಾನುಪ್ರಕಾಶ್ ಎಂಬುವವರ ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಸುಶೀಲಮ್ಮ ವಾಪಸ್ ಆಗುತ್ತಿದ್ದಾಗ ದಿಢೀರ್ ಕಾಡಾನೆಯೊಂದು ಪ್ರತ್ಯಕ್ಷವಾಗಿ ದಾಳಿ ನಡೆಸಿದೆ. ಸುಶೀಲಮ್ಮನನ್ನ ಸೊಂಡಿಲಿನಿಂದ ಎತ್ತಿ ಬಿಸಾಡಿ, ತಲೆ ಭಾಗವನ್ನು ತುಳಿದು ಸಾಯಿಸಿದೆ. ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು, ಅರೇಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.