ಅರಣ್ಯ ಅಧಿಕಾರಿಗಳ ಮೇಲೆ ಆನೆ ದಾಳಿ: ಹಲವರಿಗೆ ಗಾಯ
ಧಾರವಾಡ: ಜಿಲ್ಲೆಯ ತಂಬೂರ ಅರಣ್ಯ ಪ್ರದೇಶದಲ್ಲಿ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ವೇಳೆ ಆನೆಗಳು ದಿಢೀರನೆ ದಾಳಿ ಮಾಡಿದ್ದು, ಹಲವರು ಗಾಯಗೊಂಡಿದ್ದಾರೆ.
ಆಲದಕಟ್ಟಿ, ತಂಬೂರ, ಸಂಗಮೇಶ್ವರ, ಡಿಂಬವಳ್ಳಿ ಗ್ರಾಮಗಳಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದವು.
ಅರಣ್ಯ ಅಧಿಕಾರಿಗಳು ಕಾಡಾನೆಗಳನ್ನ ಕಾಡಿಗಟ್ಟಲ್ಲೂ ಕಾರ್ಯಾಚರಣೆ ಮಾಡುತ್ತಿದ್ದ ವೇಳೆ ಏಕಾಏಕಿಯಾಗಿ ದಾಳಿ ನಡೆಸಿವೆ. ಇನ್ನು ದಾಳಿಗೊಳಗಾದ ಅರಣ್ಯಾಧಿಕಾರಿಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.




