ಕುಂದಾಪುರ: ಮನೆಯವರು ದೇವಸ್ಥಾನಕ್ಕೆ ತೆರಳಿದ್ದಾಗ ಕಳವು: ಆರೋಪಿಯ ಬಂಧನ
ಕುಂದಾಪುರ: ಮನೆಯವರು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳನೋರ್ವ ವೃದ್ಧೆಯ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.
ಮಣೂರು ನಿವಾಸಿ ಪ್ರವೀಣ್ ಕುಮಾರ್ ಶೆಟ್ಟಿ (28) ಬಂಧಿತ ಆರೋಪಿ. ಆರೋಪಿಯಿಂದ 25 ಗ್ರಾಂ ತೂಕದ ಸುಮಾರು 2.5 ಲಕ್ಷ ಮೌಲ್ಯದ ಕಳ್ಳತನವಾಗಿದ್ದ ಚಿನ್ನದ ಸರವನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.




