March 4, 2026

ಮಲ್ಪೆ: ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ಪ್ರಕರಣ: ಬಂಧಿತ ಮೂವರು ಆರೋಪಿಗಳಿಗೆ ಷರತ್ತುಬದ್ದ ಜಾಮೀನು

0
image_editor_output_image1886985126-1743119679077.jpg

ಬೆಂಗಳೂರು: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮೂವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ದ ಜಾಮೀನು ನೀಡಿದೆ.

ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿರುವ ಲಕ್ಷ್ಮೀ, ಶಿಲ್ಪಾ ಹಾಗೂ ಸುಂದರ್‌ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಹೇಮಂರ್‌ ಚಂದನಗೌಡರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ನ್ಯಾಯಪೀಠ ಮೂವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿತು.

ಮಲ್ಪೆ ಬಂದರಿನಲ್ಲಿ ಮಾರ್ಚ್‌ 19ರಂದು ಮೀನುಕದ್ದ ಆರೋಪದಲ್ಲಿ ವಿಜಯನಗರದ ಲಕ್ಷ್ಮೀಬಾಯಿ ಎಂಬವರನ್ನು ಕಟ್ಟಿಹಾಕಿ ಹಲ್ಲೆ ನಡೆಸಲಾಗಿತ್ತು. ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೆ ಪೊಲೀಸರು ಪ್ರಕರಣ ದಾಖಲಿಸಿದ ಹಲ್ಲೆ ನಡೆಸಿದ್ದ ಮೂವರನ್ನು ಅರೆಸ್ಟ್ ಮಾಡಿದ್ದರು.

Leave a Reply

Your email address will not be published. Required fields are marked *

error: Content is protected !!