December 15, 2025

ಉಳ್ಳಾಲ: ದೇರಳಕಟ್ಟೆಯಲ್ಲಿರುವ ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇಬ್ಬರು

0
image_editor_output_image-2120373437-1743330224719.jpg

ಉಳ್ಳಾಲ : ದೇರಳಕಟ್ಟೆಯಲ್ಲಿರುವ ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನಿಸಿದ ಮೂವರ ಪೈಕಿ ಕೇರಳ ಮೂಲದ ಇಬ್ಬರನ್ನು ರೆಡ್ ಹ್ಯಾಂಡ್ ಆಗಿ ಕೊಣಾಜೆ ಪೊಲೀಸರು ಹಾಗೂ ಸ್ಥಳೀಯರು ಹಿಡಿದಿದ್ದಾರೆ.

ಕೇರಳ ನಿವಾಸಿಗಳಾದ ಮುರಳಿ ಮತ್ತು ಇರ್ಷಾದ್ ಬಂಧಿತರು. ನಿನ್ನೆ ಸಂಜೆ ರೈಲಿನಲ್ಲಿ ಬಂದಿದ್ದ ಮೂವರು ಆಗಂತುಕರು ದೇರಳಕಟ್ಟೆ ಸಮೀಪ ರಾತ್ರಿಯವರೆಗೂ ಕಾದು ಕುಳಿತು ಕೃ*ತ್ಯ ಎಸಗಲು ಮುಂದಾಗಿದ್ದಾರೆ. ತಡರಾತ್ರಿ 3 ಗಂಟೆ ವೇಳೆಗೆ ಡ್ರಿಲ್ ಮೆಷಿನ್ ಮೂಲಕ ಬಾಗಿಲು ಮುರಿಯಲು ಯತ್ನಿಸಿದ ಸಂದರ್ಭ ಸೈರನ್ ಮೊಳಗಿದೆ.

ತಕ್ಷಣ ಎಚ್ಚೆತ್ತ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಸಮೀಪದಲ್ಲೇ ಗಸ್ತಿನಲ್ಲಿದ್ದ ಕೊಣಾಜೆ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಮೂವರು ಆರೋಪಿಗಳು ತಲೆಮರೆಸಿಕೊಳ್ಳಲು ಯತ್ನಿಸಿದ್ದಾರೆ. ಪೊಲೀಸರು ಹಾಗೂ ಸ್ಥಳೀಯರು ಸೇರಿ ಇಬ್ಬರನ್ನು ಸೆರೆಹಿಡಿಯುವಲ್ಲಿ ಸಫಲರಾಗಿದ್ದು, ಓರ್ವ ಆರೋಪಿ ಪರಾರಿಯಾಗಿದ್ದಾನೆ. ವಿಚಾರಣೆ ವೇಳೆ ಆರೋಪಿಗಳಿಬ್ಬರು ಕೇರಳದಲ್ಲಿ ವಿಜಯ ಬ್ಯಾಂಕ್ ದರೋಡೆ ನಡೆಸಿದವರೆಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!