December 15, 2025

ಕುಟುಂಬ ಕಲಹದಿಂದ ನೊಂದು ಟೆಕ್ಕಿ ಆತ್ಮಹತ್ಯೆ

0
image_editor_output_image-423365056-1744091731723.jpg

ಬೆಂಗಳೂರು: ಕುಟುಂಬ ಕಲಹದಿಂದ ಮಾನಸಿಕವಾಗಿ ನೊಂದು ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಖಾಸಗಿ ಕಂಪನಿಯ ಹಿರಿಯ ಉದ್ಯೋಗಿ ಪ್ರಶಾಂತ್ ನಾಯರ್ (40) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.

ಚಿಕ್ಕಬಾಣಾವರದ ಡಿ.ಎಕ್ಸ್ ಸ್ಮಾರ್ಟ್ ನೆಸ್ಟ್ ಅಪಾರ್ಟ್ಮೆಂಟ್‌ನಲ್ಲಿ ಟೆಕ್ಕಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 12 ವರ್ಷದ ಹಿಂದೆ ಪೂಜಾ ಎಂಬಾಕೆಯನ್ನು ಪ್ರಶಾಂತ್ ಮದುವೆಯಾಗಿದ್ದರು. ಪ್ರಶಾಂತ್ ದಂಪತಿಗೆ 8 ವರ್ಷದ ಮಗಳು ಸಹ ಇದ್ದಾಳೆ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಪೂಜಾ ನಾಯರ್ ದಂಪತಿ ನಡುವೆ ಸಾಕಷ್ಟು ಭಿನ್ನಾಭಿಪ್ರಾಯವಿತ್ತು. ಬಳಿಕ ಡಿವೋರ್ಸ್ ಕೂಡ ಆಗಿದೆ ಎಂಬ ಮಾಹಿತಿ ಲಭಿಸಿದೆ. ಇದರಿಂದ ಮಾನಸಿಕವಾಗಿ ನೊಂದಿದ್ದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಸಂಶಯ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!