December 15, 2025

ಗಾಳಿ ಮಳೆಗೆ ತುಂಡಾಗಿ ಬಿದ್ದಿದ್ದ ಹೈಟೆನ್ಷನ್ ವಿದ್ಯುತ್ ತಂತಿಯನ್ನು ತುಳಿದು ನೌಕರ ಸಾವು

0
image_editor_output_image-956854198-1745221113010.jpg

ಹಾಸನ: ಗಾಳಿ ಮಳೆಗೆ ತುಂಡಾಗಿ ಬಿದ್ದಿದ್ದ ಹೈಟೆನ್ಷನ್ ವಿದ್ಯುತ್ ತಂತಿಯನ್ನು ತುಳಿದು ಕೆಎಸ್‍ಆರ್‌ಟಿಸಿ ನೌಕರರೊಬ್ಬರು ಸಾವಿಗೀಡಾದ ಘಟನೆ ನಗರದ ಬಿಟಿ ಕೊಪ್ಪಲಿನಲ್ಲಿ ನಡೆದಿದೆ.

ಮೃತರನ್ನು ನಂದೀಶ್ (41) ಎಂದು ಗುರುತಿಸಲಾಗಿದೆ. ಅವರು ವಾಕಿಂಗ್ ಹೋಗಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈ ಮೂಲಕ ಜಿಲ್ಲೆಯಲ್ಲಿ ಮಳೆಗೆ ಮೊದಲ ಬಲಿಯಾದಂತಾಗಿದೆ.

Leave a Reply

Your email address will not be published. Required fields are marked *

error: Content is protected !!