ಶಿರ್ವ: ಬಸ್ಸಿನ ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟ ಪ್ರಯಾಣಿಕ
ಶಿರ್ವ : ಕೆಎಸ್ಆರ್ಟಿಸಿ ಐರಾವತ ಬಸ್ಸಿನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ಬಸ್ಸಿನ ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟ ಘಟನೆ ಶಿರ್ವ ಮುಂಬೈನಿಂದ ಉಡುಪಿ- ಶಿರ್ವ- ಮೂಡುಬಿದಿರೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಎ. 21 ರಂದು ಮುಂಜಾನೆ ನಡೆದಿದೆ.
ಮೃತರನ್ನು ಕುಮಟಾ ಮೂಲದ ಪ್ರಯಾಣಿಕ ಸುಮಾರು 45 ವರ್ಷ ಪ್ರಾಯದ ಸತ್ಯ ಭಂಡಾರಿ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಅಂಬುಲೆನ್ಸ್ನಲ್ಲಿ ಉಡುಪಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.





