ಜಮ್ಮು-ಕಾಶ್ಮೀರ: ಪ್ರವಾಸಿಗರ ಮೇಲೆ ಉಗ್ರರ ಗುಂಡಿನ ದಾಳಿ: ಶಿವಮೊಗ್ಗದ ವ್ಯಕ್ತಿ ಮೃತ್ಯು
ಜಮ್ಮು-ಕಾಶ್ಮೀರ: ಪಹಲ್ಗಾಮ್ದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮೃತಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ, ಮಂಜುನಾಥ್ ಮೃತಪಟ್ಟವರು. ಉದ್ಯಮಿ ಮಂಜುನಾಥ ಅವರ ಪತ್ನಿ ಪಲ್ಲವಿ ಮತ್ತು ಪುತ್ರ ಸುರಕ್ಷಿತವಾಗಿದ್ದಾರೆ.
ಮಂಜುನಾಥ್ ಅವರ ಪತ್ನಿ ಪಲ್ಲವಿ ಹಾಗೂ ಪುತ್ರ ಅಭಿಜೇಯ ಅವರನ್ನು ರಕ್ಷಿಸಿ, ಸ್ಥಳೀಯರು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.




