March 12, 2026

ಮಂಗಳೂರು: ಗುಂಪು ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

0
image_editor_output_image2074386198-1745771805139.jpg

ಮಂಗಳೂರು: ಕುಡುಪು ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಅನಿಲ್ ಎಂಬಾತನನ್ನು ಗೋಕಾಕದಿಂದ ವಶಕ್ಕೆ ಪಡೆಯಲಾಗಿದೆ. ಇದರೊಂದಿಗೆ ಬಂಧಿತ ಆರೋಪಿಗಳ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

ಹಲ್ಲೆ ನಡೆಸಿದ ಬಳಿಕ ತಲೆ ಮರೆಸಿಕೊಂಡವರಿಗಾಗಿ ಪೊಲೀಸರ ತಂಡ ಹುಡುಕಾಟ ನಡೆಸುತ್ತಿದೆ. ಆ ದಿನ ಸ್ಥಳದಲ್ಲಿದ್ದ ಸುಮಾರು 15 ಮಂದಿಗೆ ನೋಟಿಸ್ ನೀಡಿ ವಿಚಾರಣೆಗೆ ಬರಲು ತಿಳಿಸಲಾಗಿದ್ದು, ಕೆಲವರ ವಿಚಾರಣೆ ನಡೆಯುತ್ತಿದೆ.

Leave a Reply

Your email address will not be published. Required fields are marked *

error: Content is protected !!