ಮಂಗಳೂರು: ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಚಿಕ್ಕಮಗಳೂರಿನ ರಂಜಿತ್, ನಾಗರಾಜ್ ಸಹಿತ 8 ಮಂದಿಯ ಬಂಧನ
ಮಂಗಳೂರು: ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಒಟ್ಟು 8 ಮಂದಿಯನ್ನು ಪೊಲೀಸರು ಬಂಧಿಸಿರುವುದಾಗಿ ವಾರದಿಯಾಗಿದೆ.
ಚಿಕ್ಕಮಗಳೂರಿನ ಕಳಸ ನಿವಾಸಿ ರಂಜಿತ್ (19), ಚಿಕ್ಕಮಗಳೂರಿನ ಕಳಸ ನಿವಾಸಿ ನಾಗರಾಜ್ (20), ಶಾಂತಿಗುಡ್ಡೆ ಪೇಜಾವರ ಗ್ರಾಮದ ನಿವಾಸಿ ಅಬ್ದುಲ್ ಸಫಾನ್ (29), ಬಜ್ಜೆ ನಿವಾಸಿ ನಿಯಾಝ್ (28), ಕೆಂಜಾರು ನಿವಾಸಿ ಮುಹಮ್ಮದ್ ಮುಝಮ್ಮಿಲ್ (32), ಕಳವಾರು ನಿವಾಸಿ ಕಲಂದರ್ ಶಾಫಿ (31), ಜೋಕಟ್ಟೆ ನಿವಾಸಿ ಮುಹಮ್ಮದ್ ರಿಝಾನ್ (28), ಆದಿಲ್ ಮೆಹರೂಫ್. ಈತ 2022 ರಲ್ಲಿ ಕೊಲೆಯಾದ ಫಾಝಿಲ್ ಅವರ ಸಹೋದರ ಎಂದು ತಿಳಿದುಬಂದಿದೆ.




