January 31, 2026

ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಕೋಮುಭಾವನೆ ಕೆರಳಿಸುವಂತಹ ಪೋಸ್ಟ್: ವಿವಿಧ ಠಾಣೆಗಳಲ್ಲಿ 12 ಪ್ರಕರಣಗಳು ದಾಖಲು

0
image_editor_output_image-1929813725-1746263913327.jpg

ಮಂಗಳೂರು: ಬಜ್ಪೆ ಕಿನ್ನಿಪದವಿನಲ್ಲಿ ನಡೆದ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಕೋಮುಭಾವನೆ ಕೆರಳಿಸುವಂತಹ ಪೋಸ್ಟ್ ಹಾಕಿದ್ದ ವ್ಯಕ್ತಿಗಳು ಮತ್ತು ಗುಂಪುಗಳ ವಿರುದ್ಧ ನಗರ ಪೊಲೀಸ್ ಕಮಿಷನರೇಟ್‌ನ ವಿವಿಧ ಠಾಣೆಗಳಲ್ಲಿ ಒಟ್ಟು 12 ಪ್ರಕರಣಗಳು ದಾಖಲಾಗಿವೆ.

ಮೂಲ್ಕಿ, ಕಾವೂರು ಮತ್ತು ಮಂಗಳೂರು ದಕ್ಷಿಣ ಠಾಣೆಗಳಲ್ಲಿ ತಲಾ ಎರಡು, ಮಂಗಳೂರು ಉತ್ತರ, ಪೂರ್ವ, ಉರ್ವ, ಬರ್ಕೆ, ಮೂಡುಬಿದಿರೆ ಮತ್ತು ಕಂಕನಾಡಿ ಠಾಣೆಗಳಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ. ಶಾಂತಿ ಮತ್ತು ಸೌಹಾರ್ದಕ್ಕೆ ಧಕ್ಕೆ ತರುವ ಉದ್ದೇಶದಿಂದ ಪೋಸ್ಟ್ ಹಾಕಲಾಗಿದ್ದು ಭಾರತೀಯ ನ್ಯಾಯಸಂಹಿತೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಕಮಿಷನ‌ರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!