March 12, 2026

ಉಡುಪಿ: ತಂದೆಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಜೈಲಿನಿಂದ ಬಂದ ಭೂಗತ ಪಾತಕಿ ಬನ್ನಂಜೆ ರಾಜ

0
n662933975174635343270318154576bf52820711c32a20a61a3080120f4164ff8ac13f91e784af4a665d45.jpg

ಉಡುಪಿ: ತಂದೆಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಹೈಕೋರ್ಟ್ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜೈಲಿನಲ್ಲಿರುವ ಭೂಗತ ಪಾತಕಿ ಬನ್ನಂಜೆ ರಾಜನನ್ನು ಪೊಲೀಸರು ರವಿವಾರ ಪೆರೋಲ್‌ನಲ್ಲಿ ಉಡುಪಿಗೆ ಕರೆತಂದಿದ್ದಾರೆ.

ಎ.27ರಂದು ನಿಧನರಾದ ತಂದೆ ಎಂ.ಸುಂದರ್(88) ಅವರ ಅಂತಿಮ ಸಂಸ್ಕಾರ ಹಾಗೂ ಧಾರ್ಮಿಕ ವಿಧಿ ವಿಧಾನಗಳಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ತುರ್ತು ಪೆರೋಲ್ ನೀಡುವಂತೆ ಬನ್ನಂಜೆ ರಾಜ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದನು.

ಅದರಂತೆ ಪೊಲೀಸರು ಆತನನ್ನು ಇಂದು ಬಿಗಿ ಪೊಲೀಸ್ ಭದ್ರತೆಯಲ್ಲಿ ಮಲ್ಪೆ ಕಲ್ಮಾಡಿಯ ಸಸಿತೋಟ ಎಂಬಲ್ಲಿರುವ ಆತನ ಮನೆಗೆ ಕರೆದುಕೊಂಡು ಬಂದಿದ್ದು, ಅಲ್ಲಿ ಆತ ತಂದೆಯ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿ, ಬಳಿಕ ಮಲ್ಪೆ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು.

ಬೆಳಗಾವಿ ಜೈಲಿನಲ್ಲಿರುವ ರಾಜಾ, ಮೇ 4 ರ ಭಾನುವಾರ ಉಡುಪಿಯ ಮಲ್ಪೆಯಲ್ಲಿರುವ ತಮ್ಮ ಕುಟುಂಬ ನಿವಾಸಕ್ಕೆ ಆಗಮಿಸಿ, ಮೇ 4 ರ ಭಾನುವಾರ ನಡೆಯಲಿರುವ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.
ಹೈಕೋರ್ಟ್ ಬನ್ನಂಜೆ ರಾಜಾಗೆ ಮೇ 14 ರವರೆಗೆ ಪೆರೋಲ್ ನೀಡಿದೆ. ಆದಾಗ್ಯೂ, ಈ ಪೆರೋಲ್ ಅವಧಿಯಲ್ಲಿ ಹಲವಾರು ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಲಾಗಿದೆ. ಅವರು ಮೊಬೈಲ್ ಫೋನ್ ಬಳಸಲು ಅಥವಾ ಇಂಟರ್ನೆಟ್ ಬಳಸಲು ಅನುಮತಿ ಇಲ್ಲ. ಅಂತ್ಯಕ್ರಿಯೆಯ ಆಚರಣೆಗಳಲ್ಲಿ ಭಾಗವಹಿಸುವುದನ್ನು ಹೊರತುಪಡಿಸಿ, ಅವರು ತಮ್ಮ ಮನೆಯಿಂದ ಹೊರಗೆ ಹೋಗಲು ಅವಕಾಶವಿಲ್ಲ.
ಬನ್ನಂಜೆ ರಾಜ ಮೇ 14 ರಂದು ಬೆಳಗಾವಿ ಜೈಲಿಗೆ ಮರಳಬೇಕಾಗುತ್ತದೆ. ಅವರು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ ಮತ್ತು ಇನ್ನೂ 23 ಪ್ರಕರಣಗಳು ವಿಚಾರಣೆಯಲ್ಲಿವೆ.

ಭೂಗತನಾಗಿದ್ದ ಬನ್ನಂಜೆ ರಾಜನನ್ನು 2015ರ ಫೆಬ್ರವರಿ ತಿಂಗಳಲ್ಲಿ ದಕ್ಷಿಣ ಆಫ್ರಿಕಾದ ಮೊರಕ್ಕೊದಲ್ಲಿ ಪೊಲೀಸರು ಬಂಧಿಸಿ, ಬೆಂಗಳೂರಿಗೆ ಕರೆತಂದಿದ್ದರು. ಕಾರವಾರ ಕೊಲೆ ಪ್ರಕರಣ, ಉಡುಪಿ ಐರೋಡಿ ಜ್ಯುವೆಲ್ಲರ್ಸ್‌ ಶೂಟೌಟ್ ಸೇರಿ ದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಬನ್ನಂಜೆ ರಾಜ, ಒಟ್ಟು 23 ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಕಳೆದ 10 ವರ್ಷಗಳಿಂದ ಬೆಳಗಾವಿಯ ಜೈಲಿನಲ್ಲಿದ್ದಾನೆ.

Leave a Reply

Your email address will not be published. Required fields are marked *

error: Content is protected !!