ಮಂಗಳೂರು: ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ
ಮಂಗಳೂರು: ಇಲ್ಲಿನ ಕುಲಶೇಖರ ಚರ್ಚ್ ಬಳಿಯ ಅಂಗಡಿಯ ಹಿಂದೆ ಕೊಳೆತ ಶವ ಪತ್ತೆಯಾಗಿದ್ದು, ಮೃತ ವ್ಯಕ್ತಿಯನ್ನು ಶಕ್ತಿನಗರದ ನಿವಾಸಿ ಸುರೇಂದ್ರ (46) ಎಂದು ಗುರುತಿಸಲಾಗಿದೆ.
ಸುರೇಂದ್ರ ಅಪಸ್ಮಾರದಿಂದ ಬಳಲುತ್ತಿದ್ದರು ಮತ್ತು ಆ ಪ್ರದೇಶದಲ್ಲಿ ಕಸ ಸಂಗ್ರಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅಂಗಡಿಯ ಹಿಂಭಾಗದ ಶೌಚಾಲಯದ ಬಳಿ ಕೊಳೆತ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.
ಕದ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪೊಲೀಸರಿಂದ ತನಿಖೆ ನಡೆಯುತ್ತಿದೆ.





