March 12, 2026

ಬಂಟ್ವಾಳ: ಲಾರಿಗಳ ನಡುವೆ ಅಪಘಾತ: ಚಾಲಕ ರಫೀಕ್ ಮೃತ್ಯು-ಮೂವರಿಗೆ ಗಾಯ

0
image_editor_output_image364693946-1747332216212

ಬಂಟ್ವಾಳ: ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಲಾರಿಯಲ್ಲಿದ್ದ ಜಲ್ಲಿ ಮಿಶ್ರಿತ ಡಾಮರು ಮೈಮೇಲೆ ಬಿದ್ದು ಚಾಲಕನೋರ್ವ ಮೃತಪಟ್ಟ ಘಟನೆ ಬಂಟ್ವಾಳದ ಸಜೀಪದ ಬಳಿ ಗುರುವಾರ ನಡೆದಿದೆ.

ಸಜೀಪನಡು ಗೋಳಿಪಡ್ಪು ನಿವಾಸಿ ರಫೀಕ್ ( 45) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಲಾರಿಯಲ್ಲಿದ್ದ ಕ್ಲೀನರ್ ಯೂಸುಫ್ ಎಂಬಾತನ ಕೈ ಕಾಲುಗಳ ಮೇಲೆ ಡಾಮರು ಬಿದ್ದಿದ್ದು, ಗಂಭೀರ ಗಾಯವಾಗಿದೆ. ಇನ್ನೊಂದು ಲಾರಿಯ ಚಾಲಕ ರಿಜ್ವಾನ್ ಹಾಗೂ ಅಲ್ಪಾಸ್ ಎಂಬವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಂಚಿನಡ್ಕಪದವು ಕಡೆಯಿಂದ ಸಜೀಪನಡು ಹೋಗುತ್ತಿದ್ದ ವೇಳೆ ಕಂಚಿನಡ್ಕಪದವು ಎಂಬಲ್ಲಿ ಅಪಘಾತ ಸಂಭವಿಸಿದೆ. ಕೆಂಪು ಕಲ್ಲುಗಳನ್ನು ಸಾಗಿಸುವ ಲಾರಿಗೆ ಹಿಂಬದಿಯಿಂದ ಬರುತ್ತಿದ್ದ ಡಾಮರು ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡು ಟಿಪ್ಪರ್ ಲಾರಿಗಳು ಆಳೆತ್ತರದಲ್ಲಿದ್ದ ಅಡಿಕೆ ತೋಟಕ್ಕೆ ಪಲ್ಟಿಯಾಗಿ ಬಿದ್ದಿದೆ.

ಟಿಪ್ಪರ್ ಲಾರಿಯಲ್ಲಿದ್ದ ಬಿಸಿಯಾದ ಡಾಮರು ಮಿಶ್ರಿತ ಜಲ್ಲಿ ಕಲ್ಲುಗಳು ಕೆಂಪು ಕಲ್ಲು ಸಾಗಿಸುವ ಲಾರಿ ಚಾಲಕನ ಮೈ ಮೇಲೆ ಬಿದ್ದಿದೆ. ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ. ಬಿಸಿಯಾದ ಡಾಮರುನಲ್ಲಿ ಬೆಂದು ಹೋಗಿದ್ದ ಚಾಲಕ ರಫೀಕ್ ಮೃತಪಟ್ಟಿದ್ದಾರೆ. ಜೊತೆಗೆ ಇದ್ದ ಕ್ಲೀನರ್ ಯೂಸುಫ್ ನ ಮೇಲೆಯೂ ಡಾಮರು ಬಿದ್ದಿದ್ದು ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ  ಟ್ರಾಫಿಕ್ ಎಸ್.ಐ.ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!