ಉಳ್ಳಾಲ: ಚಲಿಸುತ್ತಿದ್ದ ವೇಳೆ ಕಳಚಿ ಬಿದ್ದ ಬಸ್ಸಿನ ಟಯರ್
ಉಳ್ಳಾಲ : ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನ ಟಯರ್ ಏಕಾಏಕಿ ಕಳಚಿ ಬಿದ್ದು ಕಂದಕಕ್ಕೆ ವಾಲಿದ ಘಟನೆ ನಡೆದಿದ್ದು, ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.
ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಕಲ್ಕಟ್ಟ ಎಂಬಲ್ಲಿ ದುರ್ಘಟನೆ ಸಂಭವಿಸಿದ್ದು, ಮಂಗಳೂರಿನಿಂದ ಮುಡಿಪು ಕಡೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ನ ಟಯರ್ ಕಳಚಿ ಬಿದ್ದಿದೆ. ಟಯರ್ ಕಳಚುತ್ತಿದ್ದಂತೆಯೇ ನಿಯಂತ್ರಣ ಕಳೆದುಕೊಂಡ ಬಸ್ಸು ಕಂದಕದ ಕಡೆ ವಾಲಿ ನಿಂತಿದೆ.
ಅದೃಷ್ಟವಶಾತ್ ಚಾಲಕ, ನಿರ್ವಾಹಕ ಸೇರಿದಂತೆ ಪ್ರಯಾಣಿಕರೆಲ್ಲರೂ ಜೀವಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.




