March 12, 2026

ಪುತ್ತೂರು: ಶಾಮಿಯಾನ ಲಾರಿಗೆ ಬೈಕ್ ಡಿಕ್ಕಿ: ಬೈಕ್ ಸವಾರ ಮೃತ್ಯು

0
image_editor_output_image-1567034485-1747590771228

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಯಾವುದೇ ಮುನ್ನೆಚ್ಚರಿಕಾ ಸಂಕೇತಗಳಿಲ್ಲದೆ ರಸ್ತೆಯಲ್ಲೇ ನಿಲ್ಲಿಸಲಾಗಿದ್ದ ಶಾಮಿಯಾನ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ದುರ್ಮರಣಕ್ಕೀಡಾದ ಘಟನೆ ಉರ್ಲಾಂಡಿ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

ಕುಂಜುರುಪಂಜ ಸಮೀಪದ ನಿವಾಸಿ ಸುದೀಪ್ ಚೊಕ್ಕಾಡಿ (36) ಮೃತಪಟ್ಟ ದುರ್ದೈವಿ. ವರದಿಗಳ ಪ್ರಕಾರ, ಸುದೀಪ್ ಅವರು ಭಾನುವಾರ ರಾತ್ರಿ ತಮ್ಮ ಬೈಕ್‌ನಲ್ಲಿ ನೇರಳಕಟ್ಟೆಯಲ್ಲಿರುವ ತಮ್ಮ ಸಹೋದರಿಯ ಮನೆಯ ಕಡೆಗೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ, ಉರ್ಲಾಂಡಿ ಬಳಿ, ಶಾಮಿಯಾನ ಸಾಮಾನುಗಳನ್ನು ತುಂಬಿದ್ದ ಲಾರಿಯೊಂದನ್ನು ಚಾಲಕನು ಹೆದ್ದಾರಿಯಲ್ಲೇ, ಯಾವುದೇ ಸೂಚನಾ ಫಲಕಗಳಾಗಲೀ, ಪ್ರತಿಫಲಕಗಳಾಗಲೀ ಇಲ್ಲದೆ ಅಜಾಗರೂಕತೆಯಿಂದ ನಿಲ್ಲಿಸಿದ್ದನು.

ಮೂಲಗಳ ಪ್ರಕಾರ, ತುಂತುರು ಮಳೆ ಸುರಿಯುತ್ತಿದ್ದ ಕಾರಣ, ಕತ್ತಲೆಯಲ್ಲಿ ರಸ್ತೆಯಲ್ಲಿದ್ದ ಲಾರಿ ಏಕಾಏಕಿ ಗೋಚರಿಸದೆ, ಸುದೀಪ್ ಅವರ ಬೈಕ್ ಲಾರಿಯ ಹಿಂಬದಿಗೆ ರಭಸವಾಗಿ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಸುದೀಪ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!