ಭೀಕರ ಅಪಘಾತ ಇಬ್ಬರು ಮಕ್ಕಳು ಸಹಿತ ನಾಲ್ವರು ಸ್ಥಳದಲ್ಲೇ ಮೃತ್ಯು
ಬಳ್ಳಾರಿ: ಭೀಕರ ರಸ್ತೆ ಅಪಘಾತ ನಡೆದು ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ ಘಟನೆ ಸಂಡೂರಿನ ಜೈಸಿಂಗಪುರ ಬಳಿ ಸೋಮವಾರ (ಮೇ 26) ನಡೆದಿದೆ.
ಮೈನಿಂಗ್ ಟಿಪ್ಪರ್ ಗೆ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಸಂಡೂರು ತಾಲೂಕಿನ ಲಕ್ಷ್ಮೀಪುರದ ನಾಲ್ವರ ಅಸುನೀಗಿದ್ದಾರೆ. ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಕೊಪ್ಪಳದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸ್ಥಳಕ್ಕೆ ಸಂಡೂರು ಪೊಲೀಸರು ಭೇಟಿ ನೀಡಿದ್ದಾರೆ.




