December 15, 2025

ಮೂಡಿಗೆರೆ ರಸ್ತೆಯಲ್ಲಿ ಹುಟ್ಟುಹಬ್ಬ ಆಚರಣೆ : ಬೆಳ್ತಂಗಡಿಯ 9 ಮಂದಿ ವಿರುದ್ಧ ಪ್ರಕರಣ

0
first-information-report

ಬೆಳ್ತಂಗಡಿ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪ ರಸ್ತೆಯಲ್ಲಿ ನಿಂತು ವಾಹನದ ಮೇಲೆ ಗೆಳೆಯರು ಸೇರಿ ಕೇಕ್‌ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದವರ ವಿರುದ್ಧ ಸ್ಥಳೀಯ ಪೊಲೀಸರು 9 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ ಘಟನೆ ನಡೆದಿದೆ.

ಮಡಂತ್ಯಾರ್‌ ಗ್ರಾಮದ ರೋಹಿತ್‌ ಪೈ (19) ಎಂಬಾತನ ಹುಟ್ಟುಹಬ್ಬದ ಪ್ರಯುಕ್ತ ಮೇ 28ರಂದು ರಾತ್ರಿ ಕೊಟ್ಟಿಗೆಹಾರ ಸಮೀಪ ರಸ್ತೆಯಲ್ಲಿ ಕೇಕ್‌ ಕತ್ತರಿಸಿ ಬಳಿಕ ಮುಖಕ್ಕೆ ಬಳಿದುಕೊಂಡು ಕಿರುಚಾಡುತ್ತಿದ್ದುದನ್ನು ರಾತ್ರಿ ಕರ್ತವ್ಯದಲ್ಲಿದ್ದ ಬಣಕಲ್‌ ಪೊಲೀಸರು ಘಟನೆ ಕಂಡು ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದವರಾದ ಗಣೇಶ (24), ಪ್ರದೀಪ (19), ಸೂರಜ್‌ ಎಸ್‌. ಸಾಲಿಯಾನ್‌ (19), ಸುಜಿತ್‌ (19), ಅಜಿತ್‌ (18), ಸುದೀಪ್‌ (23), ಮಡಂತ್ಯಾರ್‌ ಗ್ರಾಮದವರಾದ ಸೂರಜ್‌ ಶೆಟ್ಟಿ (23), ಮೊಹಮ್ಮದ್‌ ಅಶ್ರಫ್‌, ರೋಹಿತ್‌ ಪೈ (19) ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!