July 14, 2025

ಕಾರು ಓವರ್‌ಟೇಕ್‌ ವಿಚಾರದಲ್ಲಿ ಗಲಾಟೆ: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲು

0
n66973411217507468353092cdf5a33a4297ac2296278b60b452b3b1d94264c61aef6e2d086f5c34515dde2.jpg

ತುಮಕೂರು: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಓವರ್‌ಟೇಕ್‌ ವಿಚಾರಕ್ಕೆ ಉಂಟಾದ ಗಲಾಟೆಗೆ ಸಂಬಂಧಿಸಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಘಟನೆಯಲ್ಲಿ ಅನಂತ್ ಕುಮಾರ್ ಹೆಗಡೆ (ಎ-1), ಅವರ ಗನ್‌ಮ್ಯಾನ್ ಶ್ರೀಧರ್ (ಎ-2), ಮತ್ತು ಕಾರು ಚಾಲಕ ಮಹೇಶ್ (ಎ-3) ವಿರುದ್ಧ ದೂರು ದಾಖಲಿಸಲಾಗಿದೆ. ಗಾಯಾಳು ಸೈಫ್‌ ಕೊಟ್ಟ ದೂರಿನ ಆಧಾರದ ಮೇಲೆ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ನೆಲಮಂಗಲ ತಾಲೂಕಿನ ಹಳೇ ನಿಜಗಲ್ ಬಳಿ ಈ ಘಟನೆ ನಡೆದಿದೆ. ಇನೋವಾ ಕಾರೊಂದು ಅನಂತ್ ಕುಮಾರ್ ಹೆಗಡೆಯವರ ಕಾರನ್ನು ಓವರ್‌ಟೇಕ್‌ ಮಾಡಿದ್ದಕ್ಕೆ ಗಲಾಟೆ ಆರಂಭವಾಗಿದೆ. ಈ ವೇಳೆ ಅನಂತ್ ಕುಮಾರ್ ಹೆಗಡೆ ಸ್ವತಃ ಹಲ್ಲೆ ಮಾಡಿ, ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅವರ ಗನ್‌ಮ್ಯಾನ್ ಶ್ರೀಧರ್‌, ಗನ್ ತೋರಿಸಿ ‘ನಿಮ್ಮನ್ನು ಶೂಟ್ ಮಾಡ್ತೀನಿ’ ಎಂದು ಬೆದರಿಕೆ ಹಾಕಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಚಾಲಕ ಮಹೇಶ್ ಕೂಡ ಗಾಯಾಳುಗಳಿಗೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

 

 

 

ಬೆಂಗಳೂರು ಗ್ರಾಮಾಂತರ ಎಸ್‌ಪಿ ಸಿ.ಕೆ. ಬಾಬಾ ಪ್ರಕಾರ, ಈ ಪ್ರಕರಣದಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್ 117(2), 126(2), 74, 351, ಮತ್ತು 352ರ ಅಡಿಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಹೆದ್ದಾರಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲು ನಿರ್ಧರಿಸಿದ್ದಾರೆ. ಗಾಯಾಳುಗಳು ದಾಬಸ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅನಂತ್ ಕುಮಾರ್ ಹೆಗಡೆಯನ್ನು ನೆಲಮಂಗಲ ಗ್ರಾಮಾಂತರ ಠಾಣೆಯ ಡಿವೈಎಸ್‌ಪಿ ಕಚೇರಿಯಲ್ಲಿ ವಿಚಾರಣೆಗೊಳಪಡಿಸಲಾಗಿತ್ತು. ವಿಚಾರಣೆಯ ಬಳಿಕ ಅವರು ತೆರಳಿದ್ದಾರೆ. ಆದರೆ, ಗನ್‌ಮ್ಯಾನ್ ಶ್ರೀಧರ್ ಮತ್ತು ಚಾಲಕ ಮಹೇಶ್‌ರನ್ನು ಪೊಲೀಸ್ ವಶದಲ್ಲಿಟ್ಟುಕೊಳ್ಳಲಾಗಿದೆ.

Leave a Reply

Your email address will not be published. Required fields are marked *

error: Content is protected !!