ಸಿದ್ದರಾಮಯ್ಯರನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸಬೇಕು: ಸಂಸದ ವಿ.ಶ್ರೀನಿವಾಸ ಪ್ರಸಾದ್
ಮೈಸೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ತಾಲಿಬಾನ್ ಆಡಳಿತ ಹೇಗಿದೆ ಎಂದು ಖುದ್ದಾಗಿ ತಿಳಿದು ಕೊಳ್ಳಬೇಕಾಗಿದೆ. ಹಾಗಾಗಿ ಅವರನ್ನು ಒಂದು ತಿಂಗಳ ಕಾಲ ತಾಲಿಬಾನ್ ಆಡಳಿತವಿರುವ ಆಫ್ಘಾನಿಸ್ತಾನಕ್ಕೆ ಕಳುಹಿಸಿ ಕೊಡಬೇಕಾಗಿದೆ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರವನ್ನು ತಾಲಿಬಾನ್ ಸರ್ಕಾರ ಎಂದು ಕರೆಯುತ್ತಿರುವ ಸಿದ್ದರಾಮಯ್ಯ ಅವರನ್ನು ಒಂದು ತಿಂಗಳ ಕಾಲ ತಾಲಿಬಾನ್ ಆಡಳಿತವಿರುವ ಆಫ್ಘಾನಿಸ್ತಾನಕ್ಕೆ ಕಳುಹಿಸಿ ಕೊಡಬೇಕಾಗಿದೆ ಎಂದು ಸಲಹೆ ನೀಡಿದ್ದಾರೆ.




