ಚಾಲಕನ ನಿಯಂತ್ರಣ ತಪ್ಪಿದ ಉರುಳಿದ ಬಿದ್ದ ಬಸ್: 13ಕ್ಕೂ ಹೆಚ್ಚು ಮಂದಿಗೆ ಗಾಯ
ಯಳಂದೂರು: ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಚೈನ್ ಗೇಟ್ ಬಳಿ ಸೋಮವಾರ ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಸೋಮವಾರ ತಾಲೂಕಿನ ಪ್ರಸಿದ್ದ ಧಾರ್ಮಿಕ ಯಾತ್ರಾಸ್ಥಳವಾಗಿರುವ ಬಿಳಿಗಿರಿರಂಗನ ಬೆಟ್ಟಕ್ಕೆ ಪ್ರವಾಸಕ್ಕೆ ತೆರಳಿದ್ದ ಇವರು ಅಲ್ಲಿಂದ ವಾಪಸ್ ಆಗುವ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಉರುಳಿದ ಪರಿಣಾಮ ಈ ಘಟನೆ ಸಂಭವಿಸಿದೆ. ಗಾಯಗೊಂಡವರಲ್ಲಿ ಮಹಿಳೆಯರೇ ಅಧಿಕ ಸಂಖ್ಯೆಯಲ್ಲಿದ್ದಾರೆ.




