ಬಂಟ್ವಾಳ: ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ
ಬಂಟ್ವಾಳ: ಅಪ್ರಾಪ್ತ ಬಾಲಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಗ್ರಾಮದ ಪರ್ಲಕ್ಕೆ ಎಂಬಲ್ಲಿ ಜುಲೈ 7 ರಂದು ಸಂಜೆ ವೇಳೆ ನಡೆದಿದೆ.
ತುಂಬೆ ಪರ್ಲಕ್ಕೆ ನಿವಾಸಿ ಕರುಣಾಕರ ಗಟ್ಟಿ ಅವರ ಏಕೈಕ ಪುತ್ರ ತೇಜಸ್ ಆತ್ಮಹತ್ಯೆ ಮಾಡಿಕೊಂಡ ಬಾಲಕನಾಗಿದ್ದಾನೆ.
ತೇಜಸ್ ಮೊಡಂಕಾಪು ಕಾಲೇಜೊಂದರಲ್ಲಿ ಪಿಯುಸಿ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಇವತ್ತು ಆತನಿಗೆ ಪರೀಕ್ಷೆ ಇದ್ದು, ಸಂಜೆ ವೇಳೆ ಕ್ಲಾಸಿನಿಂದ ಮನೆಗೆ ಬಂದಿದ್ದಾನೆ.
ತಂದೆ ತಾಯಿ ಇಬ್ಬರು ಖಾಸಗಿ ಕೆಲಸದಲ್ಲಿರುವ ಕಾರಣ ಅವರು ಮನೆಗೆ ಬರುವಾಗ ರಾತ್ರಿಯಾಗುತ್ತದೆ. ಮಗ ಎಂದಿನಂತೆ ಸಂಜೆ ಮನೆಗೆ ಬಂದು ಮನೆಯಲ್ಲಿ ಇರುತ್ತಾನೆ. ಅದೇ ರೀತಿ ತಂದೆ ಮನೆಗೆ ಬಂದಾಗ ಬಾಗಿಲು ಹಾಕಿದ್ದು ಕಂಡು ಮನೆಯೊಳಗೆ ನೋಡಿದಾಗ ಕೋಣೆಯಲ್ಲಿ ನೇಣು ಬಿಗಿದು ನೇತಾಡುವುದು ಕಂಡು ಬಂದಿದೆ.
ಕೂಡಲೇ ಆಸ್ಪತ್ರೆಗೆ ತರಲಾಗಿದೆಯಾದರೂ ಆತ ಮೃತಪಟ್ಟಿರುವುದಾಗಿ ವೈದ್ಯರು ಪರೀಕ್ಷಿಸಿ ತಿಳಿಸಿದ್ದಾರೆ ಎಂದು ತಿಳಿಸಿದ್ದಾರೆ.
ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ, ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.





