ವಿಟ್ಲ: ಬಸ್ ನಿಲ್ದಾಣದ ಸಮೀಪ ಶಾಲಾ ಸಹಪಾಠಿ ಜತೆ ಮಾತನಾಡುತ್ತಿದ್ದಾಗ ವ್ಯಕ್ತಿಯಿಂದ ಅಪ್ರಾಪ್ತ ಬಾಲಕನಿಗೆ ಜೀವ ಬೆದರಿಕೆ: ಆರೋಪಿ ಪೊಲೀಸ್ ವಶಕ್ಕೆ
ವಿಟ್ಲ: ಇಲ್ಲಿಯ ಖಾಸಗಿ ಬಸ್ ನಿಲ್ದಾಣದ ಸಮೀಪ ಅಪ್ರಾಪ್ತ ಪ್ರಾಯದ ಬಾಲಕ ಆತನ ಶಾಲಾ ಸಹಪಾಠಿಯೊಬ್ಬಳೊಂದಿಗೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ವ್ಯಕ್ತಿ ಬಾಲಕನಿಗೆ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಮಂಜೇಶ್ವರ ಎನ್ಮಕಜೆ ನಿವಾಸಿ ಪದ್ಮರಾಜ್ ಎಂಬಾತನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಅಪ್ರಾಪ್ತ ಬಾಲಕ ತನ್ನ ಶಾಲಾ ಸಹಪಾಠಿಯೊಂದಿಗೆ ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿ ಮಾತನಾಡುತ್ತಿದ್ದರು. ಈ ಸಂದರ್ಭ ಪದ್ಮರಾಜ್ ಎಂಬಾತ ಹಿಂದೂ ಹುಡುಗಿಯೊಂದಿಗೆ ಮಾತನಾಡುತ್ತಿರುವ ಬಗ್ಗೆ ತಕರಾರು ತೆಗೆದು, ಜೀವಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 83/2025, ಕಲಂ: 126(2), 352, 351(3),196(1)(a) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಆತನ ವಿಚಾರಣೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.





