March 13, 2026

ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

0
image_editor_output_image-1284435460-1752131038781.jpg

ವಿಜಯಪುರ: ಮಾರಕಾಸ್ತ್ರ ಬಳಸಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಗ್ಯಾಂಗ್ ಬಾವಡಿ ಪ್ರದೇಶದಲ್ಲಿ ನಡೆದಿದೆ.

ಫೈಸಲ್ ಇನಾಂದಾರ್ (24) ಕೊಲೆಯಾದ ಯುವಕ.

ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು ಯುವಕನನ್ನು ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ ಮಾರಿಹಾಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಈವರೆಗೂ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಪೊಲೀಸರು ಶ್ವಾನದಳ, ಬೆರಳಚ್ಚು ತಂಡದಿಂದ ಪರೀಕ್ಷೆ ನಡೆಸಲಾಗಿದೆ. ಸದ್ಯ ಗಾಂಧಿಚೌಕ್ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *

error: Content is protected !!