ಹಸು ಮೇಯಿಸುವಾಗ ಹೃದಯಾಘಾತವಾಗಿ ಯುವಕ ಸಾವು
ರಾಮನಗರ: ಹಸು ಮೇಯಿಸುವಾಗ ಹೃದಯಾಘಾತವಾಗಿ 25 ವರ್ಷದ ಯುವಕ ಸಾವನ್ನಪ್ಪಿದ ಘಟನೆ ರಾಮನಗರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಗಿರೀಶ್ (25) ಹೃದಯಾಘಾತದಿಂದ ಸಾವನ್ನಪ್ಪಿದ ಯುವಕ. ಕೂಲಿ ಕೆಲಸ ಮಾಡಿಕೊಂಡಿದ್ದ ಯುವಕ ಮಧ್ಯಾಹ್ನ ಹಸು ಮೇಯಿಸುವಾಗ ಎದೆನೋವು ಕಾಣಿಸಿಕೊಂಡು ಜಮೀನಿನ ಬಳಿಯೇ ಕುಸಿದು ಬಿದ್ದಿದ್ದಾನೆ.
ಕೂಡಲೇ ಸ್ಥಳೀಯರು ಗಮನಿಸಿ ಆಸ್ಪತ್ರೆಗೆ ದಾಖಲಿಸಿದ ವೇಳೆ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಮೃತ ಗಿರೀಶ್ ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮೃತದೇಹದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.




