2003ರಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ನಾಪತ್ತೆಯಾಗಿದ್ದ ಯುವತಿ: ವಿಚಾರಣೆ ನಡೆಸುವಂತೆ ದೂರು ನೀಡಿದ ಯುವತಿ ತಾಯಿ
ಬೆಳ್ತಂಗಡಿ: ಅನನ್ಯ ಭಟ್ ಎಂಬ ಹೆಸರಿನ ವೈದ್ಯಕೀಯ ವಿಧ್ಯಾರ್ಥಿನಿಯು 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಕಣ್ಮರೆಯಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಸದ್ರಿ ಯುವತಿಯ ತಾಯಿ ಈ ದಿನ ದಿನಾಂಕ 15.07.2025 ರಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಯಲ್ಲಿ ಪೊಲೀಸ್ ಅಧೀಕ್ಷಕರಿಗೆ ದೂರು ಅರ್ಜಿ ನೀಡಿರುತ್ತಾರೆ.
ಸದ್ರಿ ದೂರಿನ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಎಸ್ಪಿ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





