ಸುಬ್ರಹ್ಮಣ್ಯ: ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ಸಿಕ್ಕಿಹಾಕಿಕೊಂಡ ಕಾರು
ಸುಬ್ರಹ್ಮಣ್ಯ: ದಕ್ಷಿಣ ಕನ್ನಡದಲ್ಲಿ ಮಳೆ ಸುರಿಯುತ್ತಿದ್ದು, ಕುಲ್ಕುಂದ ವಿಷ್ಣುಮೂರ್ತಿ ದೇವಸ್ಥಾನ ಹತ್ತಿರ ಮರದ ಕೊಂಬೆಯೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಕಾರೊಂದು ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ.
ಕಲ್ಕುಂದ ವಿಷ್ಣುಮೂರ್ತಿ ದೇವಸ್ಥಾನ ಸಮೀಪದ ರಸ್ತೆಯಲ್ಲಿ ಮರದ ಕೊಂಬೆಯನ್ನು ಏಕಾಏಕಿ ಬಿದ್ದಿದೆ. ಈ ವೇಳೆ ಕಾರೊಂದು ಕೊಂಬೆಯಡಿ ಸಿಲುಕಿಕೊಂಡಿದೆ. ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯಗಳಾಗಿಲ್ಲ ಎಂದು ತಿಳಿದು ಬಂದಿದೆ. ಈ ರಸ್ತೆಯಲ್ಲಿ ಸ್ವಲ್ಪ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.





