December 15, 2025

ಕಾರವಾರ: ಪುತ್ರನಿಗೆ ಮೊಬೈಲ್ ನೋಡಬೇಡ ಎಂದು ಹೇಳಿದ್ದಕ್ಕೆ ನೇಣು ಬಿಗಿದು ಆತ್ಮಹತ್ಯೆ

0
image_editor_output_image-722427973-1752735595925.jpg

ಕಾರವಾರ: ಮೊಬೈಲ್ ನೋಡಬೇಡ ಎಂದು ತಂದೆ ಮಗನಿಗೆ ಬುದ್ದಿವಾದ ಹೇಳಿದ್ದಕ್ಕೆ ಮನನೊಂದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಮಂಗಳವಾಡ ಗ್ರಾಮದಲ್ಲಿ ನಡೆದಿದೆ.

ಹಳಿಯಾಳದ ಸರ್ಕಾರಿ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ ಓಂ ಕದಂ (13) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಪ್ರತಿದಿನ ಹೆಚ್ಚು ಮೊಬೈಲ್ ನೋಡುತ್ತಾ ಕಾಲಕಳೆಯುತ್ತಿದ್ದ ಮಗನಿಗೆ ತಂದೆ ಮನೋಹರ್ ಮೊಬೈಲ್ ನೋಡದಂತೆ ಬುದ್ದಿವಾದ ಹೇಳುತಿದ್ದರು.

ಮಾತು ಕೇಳದೇ ಓಂ ಕದಂ ಹಠಕ್ಕೆ ಬಿದ್ದು ಮೊಬೈಲ್ ನೋಡುತಿದ್ದ. ಮಂಗಳವಾರ ರಾತ್ರಿ ಮೊಬೈಲ್ ನೋಡುತ್ತಾ ಕಾಲ ಕಳೆಯುತಿದ್ದ ಮಗನಿಗೆ ಗದರಿಸಿ ಮೊಬೈಲ್ ಕಸಿದುಕೊಂಡು ಓದಿಕೊಳ್ಳುವಂತೆ ತಂದೆ ಮನೋಹರ್ ಬುದ್ದಿವಾದ ಹೇಳಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!