ಮಡಿಕೇರಿ: 5 ಸಾವಿರ ರೂ. ಚಾಲೆಂಜ್ ಮಾಡಿ ನದಿಗೆ ಹಾರಿದ ಯುವಕ: ಮುಂದೆ ಏನಾಯ್ತು ಗೊತ್ತೇ?
ಮಡಿಕೇರಿ: ಸ್ನೇಹಿತನ ಜೊತೆ 5 ಸಾವಿರ ರೂ. ಚಾಲೆಂಜ್ ಮಾಡಿ ನದಿಗೆ ಹಾರಿದ್ದ ಯುವಕನ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಮಡಿಕೇರಿ ತಾಲೂಕಿನ ಕಕ್ಕಬೆ ಗ್ರಾಮದಲ್ಲಿ ಕಳೆದ ಶನಿವಾರ ಕೆಲ ಯುವಕರು ನದಿಗೆ ಹಾರಿ ಇಂತಿಷ್ಟು ಸಮಯದಲ್ಲಿ ದಡ ಸೇರಿದರೆ 5,000 ರೂ. ಹಾಗೂ ಶೂ ಕೊಡಿಸುವುದಾಗಿ ಸವಾಲು ಹಾಕಿದ್ದರು.
ಯುವಕನನ್ನು ಕುಂಜಿಲ ಗ್ರಾಮದ ಎಂ.ಎನ್. ಸಲ್ಮಾನ್ ಎಂದು ಗುರುತಿಸಲಾಗಿದ್ದು, ಇದನ್ನೇ ಗಮನಿಸಿ ಸ್ನೇಹಿತರ ಸವಾಲು ಸ್ವೀಕರಿಸಿ, ಉಕ್ಕಿ ಹರಿಯುತ್ತಿದ್ದ ನದಿಗೆ ಹಾರಿ ದಡ ಸೇರಿದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.




