ಕಡಬ : ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದಲ್ಲಿ ನಡೆದಿದೆ.
ಇಡಾಳ ನಿವಾಸಿ, ಕರಿಯಪ್ಪ ಯಾನೆ ಕೇಶವ ಗೌಡ ಎಂಬವರ ಪುತ್ರಿ 23 ವರ್ಷದ ಶ್ವೇತಾ ಮೃತಪಟ್ಟ ಯುವತಿ.
ಶ್ವೇತಾ ಪದವೀಧರೆಯಾಗಿದ್ದು, ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಳು ಎಂದು ತಿಳಿದು ಬಂದಿದೆ.

