March 13, 2026

ವಿಟ್ಲ: ಕೆಲಸಕ್ಕೆಂದು ತೆರಳಿದ್ದ ಯುವಕ ನಾಪತ್ತೆ: ಬಂಟ್ವಾಳದ ಜಕ್ರಿಬೆಟ್ಟು ಡ್ಯಾಂ ಬಳಿ ದ್ವಿಚಕ್ರ ವಾಹನ, ಮೊಬೈಲ್ ಪತ್ತೆ

0
image_editor_output_image1926129919-1753849975872.jpg

ವಿಟ್ಲ: ಕೆಲಸಕ್ಕೆಂದು ತೆರಳಿ ಬಳಿಕ ನಾಪತ್ತೆಯಾಗಿದ್ದ ಕಡೇಶಿವಾಲಯ ಗ್ರಾಮದ ಕೊರತಿಗುರಿ ನಿವಾಸಿ, ಯುವಕನೋರ್ವನ ದ್ವಿಚಕ್ರ ವಾಹನ ಹಾಗೂ ಆತನ ಮೊಬೈಲ್ ಫೋನ್ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಡ್ಡಕಟ್ಟೆ ಸಮೀಪದ ಜಕ್ರಿಬೆಟ್ಟು ಡ್ಯಾಂ ಬಳಿ ಅನಾಥವಾಗಿ ಪತ್ತೆಯಾಗಿದೆ.

ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ಕೊರತಿಗುರಿ ನಿವಾಸಿ ಜಗದೀಶ್ ಆಚಾರ್ಯ ರವರ ಪುತ್ರ ಹೇಮಂತ್ ರವರು ಜು.28ರಂದು ಫರಂಗಿಪೇಟೆಗೆ ಕೆಲಸಕ್ಕೆಂದು ತೆರಳಿ ७ನಾಪತ್ತೆಯಾಗಿದ್ದ. ಈ ಬಗ್ಗೆ ಆತನಿಗಾಗಿ ವಿವಿದೆಡೆ ಹುಡುಕಾಟ ನಡೆಸಿದ ಅವರ ಮನೆಮಂದಿ ಜು.29ರಂದು ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಬಳಿಕ

ನಾಪತ್ತೆ ಪ್ರಕರಣ ದಾಖಲಿಸಿಕೊಂಡಿರುವ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಆತನ ಪತ್ತೆಗಾಗಿ ವಿವಿದೆಡೆ ಹುಡುಕಾಟ ಆರಂಭಿಸಿದ್ದರು.

ಈ ಮಧ್ಯೆ ಹೇಮಂತ್ ಆಚಾರ್ಯ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಹಾಗೂ ಆತನ ಮೊಬೈಲ್ ಫೋನ್ ರಾಷ್ಟ್ರೀಯ ಹೆದ್ದಾರಿ ಬಿಸಿರೋಡು ಧರ್ಮಸ್ಥಳ ರಸ್ತೆಯ ಬಡ್ಡಕಟ್ಟೆ ಸಮೀಪದ ಜಕ್ರಿಬೆಟ್ಟು ಡ್ಯಾಂ ಬಳಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!