ಧರ್ಮಸ್ಥಳ ಪ್ರಕರಣ: 7ನೇ ಸ್ಥಳದಲ್ಲಿ ಪತ್ತೆಯಾಗದ ಕಳೇಬರಗಳು
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣ ಸಂಬಂಧಿಸಿ ಸಾಕ್ಷಿ ದೂರುದಾರ ಗುರುತಿಸಿದ ಏಳನೆಯ ಸ್ಥಳದಲ್ಲಿ ಯಾವುದೇ ಕಳೇಬರಗಳು ಸಿಕ್ಕಿಲ್ಲ. ಶುಕ್ರವಾರ ಬೆಳಗ್ಗೆ ಎಸ್.ಐ.ಟಿ ತಂಡ ಕಾರ್ಮಿಕರನ್ನು ಉಪಯೋಗಿಸಿ ಅಗೆಯುವ ಕಾರ್ಯ ಆರಂಭಿಸಿದ್ದು, ಅಗತ್ಯ ಬಂದರೆ ಉಪಯೋಗಿಸಲು ಹಿಟಾಚಿಯನ್ನು ಇಟ್ಟುಕೊಂಡಿದ್ದಾರೆ. ಆದರೆ ಅಗೆಯುವ ಸಂದರ್ಭದಲ್ಲಿ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.


