ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಕಾರು: 11 ಮಂದಿ ಸಾವು
ಉತ್ತರ ಪ್ರದೇಶ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಲುವೆಗೆ ಉರುಳಿದ ಪರಿಣಾಮ 11 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರಯಾಣಿಕರು ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಮೃತರ ವಿವರಗಳು ಮತ್ತು ಗುರುತುಗಳನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.
ಕಾರು ನದಿಗೆ ಬೀಳುತ್ತಿದ್ದಂತೆ ಗ್ರಾಮಸ್ಥರು ಕೂಡಲೇ ಪೊಲೀಸರಿಗೆ ಕರೆ ಮಾಡಿ ವಿಷಯ ಮುಟ್ಟಿಸಿದ್ದಾರೆ. ಆನಂತರ ಗ್ರಾಮಸ್ಥರು ಮತ್ತು ರಕ್ಷಣಾ ತಂಡದ ಸಹಾಯದಿಂದ 11 ಮೃತದೇಹಗಳನ್ನ ಹೊರತೆಗೆದಿದ್ದಾರೆ.




