March 19, 2026

ಪುತ್ತೂರು: Facebook ಪೇಜಿನಲ್ಲಿ ಸುಳ್ಳು ಮಾಹಿತಿ ಆರೋಪ: ಎಸ್ಡಿಪಿಐ ಮುಖಂಡನ ವಿರುದ್ಧ ಪ್ರಕರಣ ದಾಖಲು

0
image_editor_output_image1375537537-1754457052198.jpg

ಪುತ್ತೂರು: ಬೊಳುವಾರಿನಲ್ಲಿ ವ್ಯಕ್ತಿಯೋರ್ವ ಜು.14ರಂದು ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿದ ಘಟನೆಗೆ ಸಂಬಂಧಿಸಿದಂತೆ, “ನಾವು ಭಾರತೀಯ ಸೇನೆ” ಎಂಬ ಪೇಸ್ ಬುಕ್ ಪೇಜಿನಲ್ಲಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವು ವಿರುದ್ಧ ಪ್ರಕರಣ ದಾಖಲಾಗಿದೆ.

ಘಟನೆಯ ಬಗ್ಗೆ, ನೈಜತೆಯನ್ನು ಪರಿಶೀಲಿಸದೇ ಸಮಾಜದಲ್ಲಿ ಧರ್ಮಧರ್ಮಗಳ ನಡುವೆ ವೈಮನಸ್ಸು ಹಾಗೂ ದ್ವೇಷ ಉಂಟಾಗುವ ರೀತಿಯಲ್ಲಿ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿರುವ ಆರೋಪದಲ್ಲಿ ಪುತ್ತೂರು ನಗರ ಪೊಲೀಸ್ 5: 68/2025 : 240,353(2)BNS 2023. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!