ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಪುತ್ತೂರು : ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಧ್ವಜಾರೋಹಣ ನಡೆಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಕೆ.ಪಿ.ಅಹ್ಮದ್ ಹಾಜಿ ಆಕರ್ಷಣ್ ಅವರು,ನಮ್ಮ ಹಿರಿಯರು ಜಾತಿ ,ಧರ್ಮ ಭೇದವಿಲ್ಲದೆ ನಡೆಸಿದ ಒಗ್ಗಟ್ಟಿನ ಹೋರಾಟದ ಫಲವಾಗಿ ನಾವಿಂದು ಸ್ವಾತಂತ್ರ್ಯೋತ್ಸವದ ಸವಿಯನ್ನು ಅನುಭವಿಸುತ್ತಿದ್ದೇವೆ. ಈಗ ಅದನ್ನು ಉಳಿಸಿ ಸಂರಕ್ಷಿಸುವುದು ನಮ್ಮ ಕರ್ತವ್ಯ ವಾಗಿದೆ ಎಂದರು.
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ ಪಡೀಲ್, ಸಂಚಾಲಕರಾದ ಹಾಜಿ ಮುಹಮ್ಮದ್ ಸಾಬ್, ಉಪಾಧ್ಯಕ್ಷ ಹಾಜಿ ಅಬ್ದುಲ್ ರಹಿಮಾನ್ ಅಝಾದ್ ದರ್ಬೆ, ಟ್ರಸ್ಟಿ ಎಲ್.ಟಿ.ಅಬ್ದುಲ್ ರಝಾಕ್ ಹಾಜಿ, ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಕಾಲೇಜ್ ನ ಉಸ್ತಾದ್ ಕೆ.ಎಂ.ಎ.ಕೊಡುಂಗಾಯಿ ಫಾಝಿಲ್ ಹನೀಫಿ, ಸಾಲ್ಮರ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮೋಹನಾಂಗಿ, ಕನ್ನಡ ಮತ್ತು ಆಂಗ್ಲ ಮಾಧ್ಯಮ ವಿಭಾಗದ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾದ ಇಸ್ಮಾಯಿಲ್,,ಇಲ್ಯಾಸ್, ಉಪಾಧ್ಯಕ್ಷರಾದ ಸಫ್ವಾನ,ಹಾರಿಸ್
ಮೊದಲಾದವರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಮೌಂಟನ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಝುಲೈಖಾಬಿ ಕಾರ್ಯಕ್ರಮದ ಆರಂಭದಲ್ಲಿ ಸ್ವಾಗತಿಸಿದರು.
ಶಿಕ್ಷಕರಾದ ರವೂಫ್ ಕಾರ್ಯಕ್ರಮ ನಿರ್ವಹಿಸಿ, ಮಂಜುನಾಥ ರೈ ವಂದಿಸಿದರು. ದೈಹಿಕ ಶಿಕ್ಷಕರಾದ ಅಶ್ರಫ್ ಸಹಕರಿಸಿದರು. ಸಂಸ್ಥೆಯ ಶಿಕ್ಷಕ ವೃಂದ ಮತ್ತು ಶಿಕ್ಷೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




