February 1, 2026

ಪತಿಯ ಕಿರುಕುಳಕ್ಕೆ  ಬೇಸತ್ತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

0
image_editor_output_image1234939140-1755588245917.jpg

ತುಮಕೂರು: ಗಂಡನ ಕಿರುಕುಳಕ್ಕೆ ಬೇಸತ್ತ ಗೃಹಿಣಿ ನೇಣಿಗೆ ಶರಣಾದ ಘಟನೆ ತುಮಕೂರು ನಗರದಲ್ಲಿ ನಡೆದಿದೆ.

23 ವರ್ಷದ ಸುಷ್ಮಿತಾ ಮೃತ ದುರ್ದೈವಿ. ರಾಮನಗರ ಜಿಲ್ಲೆಯ ಮಾಗಡಿಯ ಸುಷ್ಮಿತಾ ಕೊರಟಗೆರೆ ಮೂಲದ ಮೋಹನ್‌ನನ್ನು ಕಳೆದ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದರು. ತುಮಕೂರಿನ ಮಹೇಂದ್ರ ಶೋ ರೂಂನಲ್ಲಿ ಕೆಲಸ ಮಾಡುತ್ತಿರುವ ಮೋಹನ್ ಹಣ ಮತ್ತು ಸೈಟ್‌ಗಾಗಿ ಪತ್ನಿಯನ್ನು ಪೀಡಿಸುತಿದ್ದ ಎನ್ನಲಾಗಿದೆ.

ಗಂಡ ಮೋಹನ್, ಅತ್ತೆ ಮತ್ತು ಮಾವನ ಜೊತೆ ಸೇರಿ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಲ್ಲಿ ಗಂಟೆಗಟ್ಟಲೆ ಕಾದು ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ

Leave a Reply

Your email address will not be published. Required fields are marked *

error: Content is protected !!