ಧರ್ಮಸ್ಥಳ ಪ್ರಕರಣ: ಆ. 23ರವರೆಗೆ ಮಾಸ್ಕ್ ಮ್ಯಾನ್ ಚಿನ್ನಯ್ಯ SIT ಕಸ್ಟಡಿಗೆ
ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮುಸುಕುಧಾರಿಯಾಗಿ ಎಂಟ್ರಿಯಾಗಿದ್ದ ಅನಾಮಿಕ ದೂರುದಾರನನ್ನು ಬೆಳ್ತಂಗಡಿ ನ್ಯಾಯಾಲಯ 10 ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶಿಸಿದೆ.
ಇಂದು (ಆ.23) ಬೆಳ್ತಂಗಡಿ ಕೋರ್ಟ್ ಗೆ ಚೆನ್ನಯ್ಯನನ್ನು ಹತ್ತು ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕೆಂದು ಎಸ್ಐಟಿ ಮನವಿ ಮಾಡಿತ್ತು. ಈ ಮನವಿಯನ್ನು ಪುರಸ್ಕರಿಸಿದ ಬೆಳ್ತಂಗಡಿ ಕೋರ್ಟ್ ಮಾಸ್ಕ್ ಮ್ಯಾನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಎಸ್ಐಟಿ ವಶಕ್ಕೆ ನೀಡಿ ಆದೇಶಿಸಿದೆ.




