February 2, 2026

ಆರ್ ಎಸ್ ಎಸ್ ಗೀತೆ ಹಾಡಿದ ವಿಚಾರ: ಕ್ಷಮೆ ಕೇಳಿದ ಡಿ.ಕೆ ಶಿವಕುಮಾರ್

0
image_editor_output_image-832244466-1756197913602

ಬೆಂಗಳೂರು: ನಾನು ಏನು ತಪ್ಪು ಮಾಡಿಲ್ಲ. ಆರ್‌ಎಸ್‌ಎಸ್‌ ಗೀತೆ ಹಾಡು ಹಾಡಿದ್ದಕ್ಕೆ ನೋವಾಗಿದ್ರೆ ನನ್ನ ಕಾಂಗ್ರೆಸ್ ಕಾರ್ಯಕರ್ತರಿಗೆ, ಪಕ್ಷದ ನಾಯಕರಿಗೆ, ಇಂಡಿಯಾ ಕೂಟಾದ ನಾಯಕರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಆರ್‌ಎಸ್‌ಎಸ್‌ ಗೀತೆ ಹಾಡಿದ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾದ ಬೆನ್ನಲ್ಲೇ ಇಂದು ಡಿಕೆಶಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು.

ನಾನು ಯಾರಿಗೂ ಹೆದರಿಲ್ಲ ಮತ್ತು ಹೆದರಿ ಕ್ಷಮೆ ಕೇಳುತ್ತಿಲ್ಲ. ಪಾಸಿಂಗ್ ರೆಫರೆನ್ಸ್ ನಲ್ಲಿ ಆ ಹಾಡು ಹೇಳಿದ್ದೇನೆ. ಪಕ್ಷದ ನನ್ನ ಲಾಯಲ್ಟಿ ಯಾರು ಪ್ರಶ್ನೆ ಮಾಡೋದು ಬೇಡ. ಅದನ್ನ ಪ್ರಶ್ನೆ ಮಾಡಿದ್ರೆ ಅವರು ಮೂರ್ಖರು ಎಂದು ಹೇಳಿದರು.

ನಾನು ಹುಟ್ಟು ಕಾಂಗ್ರೆಸಿಗ ಮತ್ತು ಸಾಯೋದು ಕಾಂಗ್ರೆಸ್‌ನಲ್ಲೇ. ನನ್ನ ಧರ್ಮ ನಾನು ಬಿಡಲು ತಯಾರು ‌ಇಲ್ಲ. ನಾನು ಈ ಧರ್ಮದಲ್ಲಿ ಹುಟ್ಟಿದ್ದೇನೆ. ಅದೆ ಎಲ್ಲಾ ಧರ್ಮಗಳ ಮೇಲೆ ನಂಬಿಕೆ‌ ಇದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!