ಹೃದಯಾಘಾತದಿಂದ ಪಿಯುಸಿ ವಿದ್ಯಾರ್ಥಿ ಸಾವು
ಮಂಡ್ಯ: ತಂದೆ-ತಾಯಿ ಜೊತೆ ಹಬ್ಬಕ್ಕೆ ಬಟ್ಟೆ ಖರೀದಿಸುತ್ತಿದ್ದಾಗ ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಡಿ.ಮಲ್ಲಿಗೆರೆ ಗ್ರಾಮದ ಚಿರಾಗ್ (17) ಮೃತ ವಿದ್ಯಾರ್ಥಿ. ಬೆಂಗಳೂರು ಖಾಸಗಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ.
ಸೋಮವಾರ (ಆ.25) ಸಂಜೆ ಚಿರಾಗ್ ಹಬ್ಬಕ್ಕೆ ಬಟ್ಟೆ ಖರೀದಿಸಲು ತಂದೆ-ತಾಯಿ ಜೊತೆ ಹೋಗಿದ್ದ. ಈ ವೇಳೆ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ.




