ಎಸ್ ಡಿಪಿಐ ಪಕ್ಷದ ಮುಖಂಡ ಇಕ್ಬಾಲ್ ಬೆಳ್ಳಾರೆಯ ಪಂಚಾಯತ್ ಸದಸ್ಯತ್ವವನ್ನು ರದ್ದೂಗೊಳಿಸಿದ ಚುನಾವಣಾ ಆಯೋಗ
ಬೆಳ್ಳಾರೆ: ಎಸ್ ಡಿಪಿಐ ಪಕ್ಷದ ಮುಖಂಡ ಮಹಮ್ಮದ್ ಇಕ್ಬಾಲ್ ಪಂಚಾಯತ್ ಸದಸ್ಯತ್ವ ವನ್ನು ಚುನಾವಣಾ ಆಯೋಗ ರದ್ದುಗೊಳಿಸಿದೆ.
2024-25 ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆ ಪೋಷಣೆಯನ್ನು ನಿಗದಿತ ಸಮಯದಲ್ಲಿ ಸಲ್ಲಿಸದ ಹಿನ್ನಲೆಯಲ್ಲಿ ರಾಜ್ಯ ಚುನಾವಣಾ ಆಯೋಗದ ಆದೇಶದಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಬಿ)(4)ರಡಿ ಇಕ್ಬಾಲ್ ಅವರನ್ನು ಗ್ರಾಮ ಪಂಚಾಯತ್ ಸದಸ್ಯತ್ವದಿಂದ ತೆಗೆದು ಹಾಕಿ ಹಾಗೂ ಅವರ ಸದಸ್ಯ ಸ್ಥಾನವು ಖಾಲಿಯಾಗಿದೆ ಎಂದು ಘೋಷಿಸಿದೆ.




