ತಲಪಾಡಿ: ಭೀಕರ ಅಪಘಾತ ಪ್ರಕರಣ: ಮೃತರ ಸಂಖ್ಯೆ 6ಕ್ಕೇರಿಕೆ ಮೃತರ ಗುರುತು ಪತ್ತೆ
ಉಳ್ಳಾಲ: ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬ ಐವರು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ (ಆ.28) ಮಧ್ಯಾಹ್ನ ನಡೆದಿದೆ.
ಕೆ.ಸಿ.ರೋಡ್ ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್ ಮಧ್ಯೆ ಮೇಲಿನ ತಲಪಾಡಿ ಅಪಘಾತ ನಡೆದಿದೆ. ಬಳಿಕ ಬಸ್ ಹಿಂದೆ ಬಂದು ಮತ್ತೊಂದು ರಿಕ್ಷಾಗೆ ಬಡಿದಿದ್ದು, ಆ ರಿಕ್ಷಾ ಕೂಡಾ ಪಲ್ಟಿಯಾಗಿದೆ.
ಘಟನೆಯಲ್ಲಿ ಕೋಟೆಕಾರ್ ಅಜ್ಜಿನಡ್ಕದ ಒಂದೇ ಕುಟುಂಬದ ಐವರು ಮೃತರಾಗಿದ್ದರು.
ಮೃತರನ್ನು ರಿಕ್ಷಾ ಚಾಲಕ ಹೈದರ್ ಆಲಿ (47), ಫರಂಗಿಪೇಟೆಯ ಅವ್ವಮ್ಮ, ಅಜ್ಜಿನಡ್ಕದ ಖತುಜಾ (60), ಹಸ್ನಾ, ನತೀಜಾ (52), ಆಯೆಶಾ (19) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಪಾದಾಚಾರಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.




