January 31, 2026

ವಿಟ್ಲ: ಗ್ರಾಮೀಣ ಸಹಕಾರಿ ಬ್ಯಾಂಕ್ ಗೆ ಸತತ 4ನೇ ಬಾರಿಗೆ ಸಾಧನಾ ಪ್ರಶಸ್ತಿ

0
image_editor_output_image96700035-1756605038722

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್  ಸತತ ನಾಲ್ಕನೇ ಬಾರಿಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ನೀಡುವ ಸಾಧನಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.


೨೦೨೪-೨೫ ನೇ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ತನ್ನ ಕಾರ್ಯ ದಕ್ಷತೆಯನ್ನು ಮೆರೆದು ದಾಖಲೆಯ ರೂ. ೮೬೪.೪೨ ಕೋಟಿಗಳ ವ್ಯವಹಾರವನ್ನು ಮಾಡಿರುತ್ತದೆ. ರೂ. ೧೩೪.೭೩ ಕೋಟಿ ರೂಪಾಯಿಗಳ ಠೇವಣಿ ಹೊಂದಿದ್ದು, ಸದಸ್ಯರ ಹೊರಬಾಕಿ ಸಾಲ ರೂ. ೧೦೪.೧೩ ಕೋಟಿ, ಸಾಲ ವಸೂಲಾತಿ ಪ್ರಮಾಣ ಶೇಕಡಾ ೯೩.೨೦ ರಷ್ಟಿದ್ದು, ವರದಿ ವರ್ಷದಲ್ಲಿ ರೂ. ೩.೪೫ ಕೋಟಿ ಲಾಭಗಳಿಸಿದ್ದು, ಪ್ರಸ್ತುತ ಬ್ಯಾಂಕಿನ ದುಡಿಯುವ ಬಂಡವಾಳ ೧೬೪.೯೩ ಕೋಟಿಗಳಾಗಿರುತ್ತದೆ.

ಬ್ಯಾಂಕ್ ಹಲವಾರು ವರ್ಷಗಳಿಂದ ಅಡಿಟ್ ವರ್ಗೀಕರಣದಲ್ಲಿ  ’ಎ’ ತರಗತಿಯನ್ನು ಹೊಂದಿದ್ದು, ಈ ಎಲ್ಲಾ ಸಾಧನೆಗಳನ್ನು ಗುರುತಿಸಿ,  ದ.ಕ.ಜಿಲ್ಲಾ  ಕೇಂದ್ರ  ಸಹಕಾರಿ  ಬ್ಯಾಂಕಿನ  ವತಿಯಿಂದ ಶನಿವಾರ ಬ್ಯಾಂಕಿನ  ಮಹಾ ಸಭೆಯಲ್ಲಿ ವಿಟ್ಲ ಗ್ರಾಮೀಣ ಸಹಕಾರಿ  ಬ್ಯಾಂಕಿನ ಅಧ್ಯಕ್ಷರಾದ  ಹೆಚ್.ಜಗನ್ನಾಥ್ ಸಾಲಿಯಾನ್, ಉಪಾಧ್ಯಾಕ್ಷ ಮನೋರಂಜನ್ ಕೆ ಆರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಕೃಷ್ಣ ಮುರಳಿ ಶ್ಯಾಮ್.ಕೆ ಇವರಿಗೆ ಶಾಲು ಹೊದಿಸಿ ಸನ್ಮಾನಿಸಿ ಪ್ರಶಸ್ತಿಯನ್ನು ನೀಡಿದರು.


ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ  ದಯಾನಂದ ಆಳ್ವ ಕೆ ಮತ್ತು ವಿಶ್ವನಾಥ. ಎಂ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ  ಹೆಚ್ ಎನ್ ರಮೇಶ್ ಇವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!