December 15, 2025

ಕಾರವಾರ: ಊಟ ಮಾಡುವಾಗ ಗಂಟಲಲ್ಲಿ ಅನ್ನ ಸಿಲುಕಿ ಯುವಕ ಸಾವು

0
image_editor_output_image-1284120350-1756708683306.jpg

ಕಾರವಾರ: ಊಟ ಮಾಡುವಾಗ ಗಂಟಲಲ್ಲಿ ಅನ್ನ ಸಿಲುಕಿ ಯುವಕ ಸಾವನ್ನಪ್ಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ.

ಅಮಿತ್‌ ಮಾಳಸೇ‌ರ್ (38) ಮೃತ ದುರ್ದೈವಿ. ಅಮಿತ್ ಭಾನುವಾರ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಅನ್ನದ ಅಗಳೊಂದು ಗಂಟಲಲ್ಲಿ ಸಿಲುಕಿತ್ತು. ತಕ್ಷಣ ಮನೆಯವರು ಅಮಿತ್‌ಗೆ ನೀರು ಕುಡಿಸಿದ್ದು, ಆತ ಅಲ್ಲೇ ಕುಸಿದು ಬಿದ್ದಿದ್ದಾನೆ.

ಕೂಡಲೇ ಆತನನ್ನು ಅಂಬುಲೆನ್ಸ್ ಮೂಲಕ ಕಾರವಾರದ ಕ್ರಿಮ್ಸ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ವೈದ್ಯರು ಪರೀಕ್ಷಿಸಿದಾಗ ಗಂಟಲಲ್ಲಿ ಅನ್ನದ ಅಗಳು ಸಿಲುಕಿ ಅಮಿತ್ ಮೃತಪಟ್ಟಿದ್ದಾನೆಂದು ದೃಢಪಡಿಸಿದ್ದಾರೆ.

ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಅಮಿತ್, ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ವೈದ್ಯರಿಂದ ಚಿಕಿತ್ಸೆಯನ್ನು ಸಹ ಪಡೆಯುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!