ಚಿಕ್ಕಮಗಳೂರು: ಚಲಿಸುತ್ತಿದ್ದ ಬಸ್ ನಲ್ಲಿ ಹೃದಯಾಘಾತ:
ಬಸ್ ಕಂಡಕ್ಟರ್ ನಿಧನ
ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ನಿರ್ವಾಹಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಲಯಮಾರುತ ಬಳಿ ಸಂಭವಿಸಿದೆ.
43 ವರ್ಷದ ವಿಜಯ್ ಹೃದಯಾಘಾತಕ್ಕೀಡಾದ ನಿರ್ವಾಹಕ.
ವಿಜಯ್ ಚಿಕ್ಕಮಗಳೂರು-ಉಡುಪಿ ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಬೆಳಿಗ್ಗೆ ಚಿಕ್ಕಮಗಳೂರಿನಿಂದ ಉಡುಪಿ ಕಡೆಗೆ ಬಸ್ ಹೊರಟಿದ್ದು, ಮಾರ್ಗ ಮಧ್ಯೆಯೇ ನಿರ್ವಾಹಕ ವಿಜಯ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಬಸ್ ನಲ್ಲಿಯೇ ಕೊನೆಯುಸಿರೆಳೆದಿದ್ದಾರೆ.




