March 13, 2026

ಯುವತಿ ಆತ್ಮಹತ್ಯೆ: ಪತಿ ವಶಕ್ಕೆ

0
image_editor_output_image699531358-1757083984723.jpg

ಬೆಂಗಳೂರು: ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಪೂಜಾಶ್ರೀ(28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.

ಪತಿ ಕಿರುಕುಳ ನೀಡಿದ್ದರಿಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಪತಿ ನವೀನ್ ಸೇರಿ ಅವರ ಕುಟುಂಬಸ್ಥರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಗೊತ್ತಾಗಿದೆ.

ಮೂರು ವರ್ಷದ ಹಿಂದೆ ಮನೆಯವರ ನಿಶ್ಚಯದಂತೆ ಪೂಜಾಶ್ರೀ ಅವರು ನಂದೀಶ್ ಅವರನ್ನು ಮದುವೆ ಆಗಿದ್ದರು. ದಂಪತಿಗೆ ಹೆಣ್ಣು ಮಗುವಿದೆ. ದಂಪತಿ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!