ಕಾಸರಗೋಡು: ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ
ಕಾಸರಗೋಡು: ಗುಂಡು ಹಾರಿಸಿಕೊಂಡು ವೃದ್ಧರೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಮೀಯಪದವು ಮದಂಗಲ್ಲು ಎಂಬಲ್ಲಿ ನಡೆದಿದೆ.
ಮದಂಗಲ್ಲಿನ ಸುಬ್ರಾಯ ಭಟ್ (86) ಮೃತಪಟ್ಟವರು. ಶುಕ್ರವಾರ ಮಧ್ಯಾಹ್ನ ಮನೆಯಲ್ಲಿ ಈ ಘಟನೆ ನಡೆದಿದೆ.
ಮಾನಸಿಕ ಅಸ್ವಸ್ಥತೆಯಿಂದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಸುಬ್ರಾಯ ಭಟ್ ಹಾಗೂ ಪತ್ನಿ ರಾಜಮ್ಮ ಮಾತ್ರ ಮನೆಯಲ್ಲಿ ವಾಸವಾಗಿದ್ದರು. ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದ್ದಾರೆ.





