December 19, 2025

ಮಂಗಳೂರು: ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ: ಆರೋಪಿ ಶಶಿಕುಮಾ‌ರ್ ಬಂಧನ

0
image_editor_output_image-1162923915-1757250371285.jpg

ಮಂಗಳೂರು: ಬಜಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಇಲ್ಲಿನ ಪೊಲೀಸರು ತಮಿಳುನಾಡಿನ ವೆಲ್ಲೂರಿನಲ್ಲಿ ಬಂಧಿಸಿದ್ದಾರೆ.

ತಮಿಳುನಾಡಿನ ವೆಲ್ಲೂರು ಜಿಲ್ಲೆಯ ನಿವಾಸಿ ಶಶಿಕುಮಾ‌ರ್ (38) ಬಂಧಿತ ಆರೋಪಿ. ಈತ ಆ.29ರಂದು ರಾತ್ರಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆ ಮಾಡಿ, ‘ಟರ್ಮಿನಲ್ ಬಿಲ್ಡಿಂಗ್ ಅನ್ನು ಖಾಲಿ ಮಾಡಬೇಕು. ಇಲ್ಲವಾದರೆ ಧ್ವಂಸ ಮಾಡುತ್ತೇನೆ’ ಎಂದು ಬೆದರಿಕೆ ಹಾಕಿದ್ದ.

ಕರ್ತವ್ಯ ನಿರತ ಟರ್ಮಿನಲ್ ವ್ಯವಸ್ಥಾಪಕರು, ಬಜಪೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಆ ದೂರಿನ ಆಧಾರದಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 351(2), 351(3) 2 19820 20 ವಿಮಾನಯಾನದ ಸುರಕ್ಷತೆ ವಿರುದ್ಧವಾದ ಅಕ್ರಮ ಚಟುವಟಿಕೆ ತಡೆ ಕಾಯ್ದೆಯ ಸೆಕ್ಷನ್ 3(1)ರ ಅಡಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

You may have missed

error: Content is protected !!